ಕುಣಿಗಲ್ ತಾಲೂಕಿನಲ್ಲಿ ಯುವ ಕಾಂಗ್ರೆಸ್ ಬಲಪಡಿಸಲು ಶಾಸಕ ಡಾ||ರಂಗನಾಥ್ ಕರೆ.!!
ಕುಣಿಗಲ್ ತಾಲೂಕಿನಲ್ಲಿ ಡಿಕೆ ಶಿವಕುಮಾರ್ ಅವರ ಆದೇಶದ ಮೇರೆಗೆ ಯುವ ಕಾಂಗ್ರೆಸ್ ಬಲಪಡಿಸಲು ಶಾಸಕರ ಕರೆ ನೀಡಿದರು.
'ಪ್ರತಿ ತಾಲೂಕಿನಲ್ಲೂ ಕನಿಷ್ಠ 5 ಸಾವಿರ ಯುವಕರನ್ನು ಪಕ್ಷದ ಸದಸ್ಯತ್ವಕ್ಕೆ ನೋಂದಣಿ ಮಾಡಿಸಿ. ಹೆಚ್ಚು ಯುವಕರನ್ನು ಸದಸ್ಯರನ್ನಾಗಿ ಮಾಡಿ ನೀವು ನಾಯಕರಾಗಿ ಬೆಳೆಯಿರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಯೂತ್ ಕಾಂಗ್ರೆಸ್ ಸದಸ್ಯರಿಗೆ ಸಂದೇಶ ರವಾನಿಸಿದ್ದಾರೆ
ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕುಣಿಗಲ್ ತಾಲೂಕಿನಲ್ಲಿ ಬಲಪಡಿಸಲು ಶಾಸಕರಾದ ಡಾ||ರಂಗನಾಥ್ ರವರು ತಾಲೂಕಿನ ಯುವಕರನ್ನು ಪಕ್ಷದತ್ತ ಸೆಳೆಯಲು ಈಗಾಗಲೇ ಎಲ್ಲ ರೀತಿಯ ತಯಾರಿ ನಡೆಸಿದ್ದಾರೆ.
ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಈ ಪಕ್ಷದ ನೆರಳಿನಲ್ಲಿ ನಾವೆಲ್ಲ ಬೆಳೆಯುತ್ತಿದ್ದೇವೆ. ಇವತ್ತು ಕಾಂಗ್ರೆಸ್ ಪಕ್ಷ ರಾಷ್ಟ್ರದಲ್ಲಿ ದೊಡ್ಡ ಯುವಕರ ಪಡೆಯನ್ನೇ ನಿರ್ಮಾಣ ಮಾಡಿದೆ.
ಇಂದು ನಾವು ನೀವೆಲ್ಲ ಸೇರಿ ಈ ದೇಶದಲ್ಲಿ ಬದಲಾವಣೆ ತರಬೇಕಾದ ಅನಿವಾರ್ಯತೆ ಇದೆ. ಈ ದೇಶಕ್ಕೆ ಶಕ್ತಿ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ನಾವೆಲ್ಲರೂ ಮರೆಯುವುದಕ್ಕೆ ಸಾಧ್ಯವಿಲ್ಲ. ಪಕ್ಷಕ್ಕೆ ಹೊಸ ಚೈತನ್ಯ ತುಂಬುವುದು, ಯುವಕರನ್ನು ಸೇರಿಸುವುದು ನಮ್ಮ ಜವಾಬ್ದಾರಿಯಾಗಿದೆ.
ರಾಹುಲ್ ಗಾಂಧಿ ಅವರು ಯುವ ನಾಯಕತ್ವ ಬೆಳೆಸಬೇಕು ಎಂಬ ದೃಷ್ಟಿಯಿಂದ ಯೂತ್ ಕಾಂಗ್ರೆಸ್ ನಲ್ಲಿ ಚುನಾವಣೆ ಪ್ರಾರಂಭಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯಿತಿಯಿಂದ ಸಂಸತ್ತಿನವರೆಗೆ ಚುನಾವಣೆ ಮೂಲಕ ನಾಯಕರ ಆಯ್ಕೆ ಮಾಡಬೇಕಿರುವುದು ನಮ್ಮ ಕರ್ತವ್ಯ. ಈ ನಾಯಕರಾಗಿ ನೀವು ಬೆಳೆಯಬೇಕು ಎಂಬುದು ನಮ್ಮ ಉದ್ದೇಶ. ಈ ದೃಷ್ಟಿಯಿಂದ ಯುವಕರಿಗೆ ಚುನಾವಣೆಯಿಂದ ನಾಯಕತ್ವ ಬೆಳೆಸಿಕೊಳ್ಳಲು ಅವಕಾಶ ಕಲ್ಪಿಸಿದೆ.
ಹೀಗಾಗಿ ನೀವೆಲ್ಲರೂ ಅತಿ ಹೆಚ್ಚು ಯುವಕರನ್ನು ಸದಸ್ಯರನ್ನಾಗಿ ಮಾಡಿ ನಾಯಕರಾಗಿ ಬೆಳೆಯಿರಿ. ನಮ್ಮ ನಾಯಕರಾಗಿ ಬೆಳೆಯಬೇಕು, ಈ ದೇಶಕ್ಕೆ ಆಸ್ತಿಯಾಗಬೇಕು.
ಬ್ಲಾಕ್ ಕಾಂಗ್ರೆಸ್, ಮಹಿಳೆಯರು, ವಿದ್ಯಾರ್ಥಿಗಳು, ಹಿರಿಯ ನಾಯಕರು ಎಲ್ಲರೂ ಸೇರಿ ಯೂತ್ ಕಾಂಗ್ರೆಸ್ ಹಾಗೂ ಯುವ ಪೀಳಿಗೆಯನ್ನು ಬಲಪಡಿಸಬೇಕಿದೆ. ನೀವು ಹೆಚ್ಚು ಜನರನ್ನು ಸದಸ್ಯರನ್ನಾಗಿ ಮಾಡಿ ನಾಯಕರಾಗಿ ಬೆಳೆಯಿರಿ. ಇದಕ್ಕೆ ಮುಕ್ತ ಅವಕಾಶ ಇದ್ದು, ನಿಮ್ಮ ಮೇಲೆ ಯಾರ ಒತ್ತಡವೂ ಇರುವುದಿಲ್ಲ. ಹೆಚ್ಚು ಸದಸ್ಯರನ್ನು ಮಾಡಿದಷ್ಟು ನಿಮ್ಮಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ. ಇದು ದೊಡ್ಡ ಅವಕಾಶ. ನಿಮ್ಮೆಲ್ಲರಿಗೂ ಶುಭವಾಗಲಿ. ನಿಮಗೆ ನಮ್ಮ ಸಂಪೂರ್ಣ ಸಹಕಾರ ಸಿಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.
Comments
Post a Comment