ಕೇಂದ್ರ ರೈಲ್ವೇ ಖಾತೆ ಸಚಿವ ಸುರೇಶ್ ಅಂಗಡಿಯವರ ಸಾವಿನ ಸುದ್ದಿ ಕೇಳಿ ನಿಜಕ್ಕೂ ಆಘಾತಕ್ಕೊಳಗಾಗಿದ್ದೇನೆ ಎಂದು ಕುಣಿಗಲ್ ಶಾಸಕ ಡಾ||ರಂಗನಾಥ್ ಹೇಳಿದ್ದಾರೆ. ಸುರೇಶ್ ಅಂಗಡಿ ಅನುಭವಿ ರಾಜಕಾರಣಿಯಾಗಿದ್ರು.
ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ಎಕ್ಸ್ಪ್ರೆಸ್ ರೈಲುಗಳು ನಿಲ್ದಾಣಗಳಲ್ಲಿ ರೈಲು ನಿಲುಗಡೆ ಮಾಡುವಂತೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಅವರು ಕೂಡ ನನ್ನ ಮನವಿಗೆ ಸ್ಪಂದಿಸಿದ್ರು. ಅವರನ್ನು ಕಳೆದುಕೊಂಡಿದ್ದು ತುಂಬಾ ದುಖಃವಾಗುತ್ತಿದೆ. ಅವರ ಸಾವಿನಿಂದ ರಾಜ್ಯಕ್ಕೆ ಹಾಗೂ ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಕುಣಿಗಲ್ : ಕುಖ್ಯಾತ ಸರಗಳ್ಳನನ್ನು ತುಮಕೂರಿನ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಮದ್ದೂರಿನ ಇಮ್ರಾನ್ ಖಾನ್ (24) ಬಂಧಿತ ಆರೋಪಿ. ಈತ ಮಂಡ್ಯ, ತುಮಕೂರು ಸೇರಿದಂತೆ ಹಲವು ಕಡೆ ತನ್ನದೇ ಒಂದು ತಂಡ ಕಟ್ಟಿಕೊಂಡು ಸರಗಳ್ಳತನ ಮಾಡ್ತಿದ್ದ. ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರನ್ನೇ ಗುರಿಯಾಗಿರಿಸಿ ಕೃತ್ಯವೆಸಗುತ್ತಿದ್ದ. ಜೂನ್ 14 ರಂದು ಬೈಕ್ ನಲ್ಲಿ ಬಂದು ವಸಂತ ಎಂಬ ಮಹಿಳೆಯನ್ನು ತಳ್ಳಿ ಸರ ಎಗರಿಸಿದ್ದ. ತಲೆಗೆ ಪೆಟ್ಟು ಬಿದ್ದ ಕಾರಣ ವಂಸತ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕುಣಿಗಲ್ ಪೊಲೀಸರು ಮೈಸೂರು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಮ್ರಾನ್ ಖಾನ್ನನ್ನು ದಸ್ತಗಿರಿ ಮಾಡಿದ್ದಾರೆ. ಈ ಕುಖ್ಯಾತ ಸರಗಳ್ಳನ ಬಂಧನದಿಂದ 8 ಪ್ರಕರಣಗಳು ಬೆಳಕಿಗೆ ಬಂದಿವೆ.
ಕುಣಿಗಲ್ : ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬಾವುಟವನ್ನು ಹಾರಿಸಲು ಡಾ.ಅಶ್ವತ್ ನಾರಾಯಣ್ ಮುಂದಾಗಿದ್ದಾರೆ. ತಾಲೂಕಿನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಮೂರು ಬಾರಿ ಸೋತ ಹಿನ್ನೆಲೆ ಈ ಬಾರಿ ಪಕ್ಷವನ್ನು ಕುಣಿಗಲ್ ತಾಲೂಕಿನಲ್ಲಿ ಅಧಿಕಾರಕ್ಕೆ ತರಲು ಹಾಗೂ ಹಾಲಿ ಕುಣಿಗಲ್ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿಕೆ ಸಹೋದರರ ಸಂಬಂಧಿ ಡಾ.ರಂಗನಾಥ್ ಶಾಸಕರಾಗಿದ್ದರೆ ಇವರನ್ನು ಈ ಬಾರಿ ಸೋಲಿಸಲೇಬೇಕು ಎಂಬ ಶತಾಯಗತಾಯ ಸೇಡಿನ ರಾಜಕೀಯಕ್ಕೆ ಡಾ.ಅಶ್ವಥ್ ನಾರಾಯಣ್ ' ಕೈ ' ನಾಯಕ ಮಾಜಿ ಸಂಸದ ಮುದ್ದಹನುಮೇಗೌಡರಿಗೆ ಗಾಳ ಹಾಕಿ ಬಹುದೊಡ್ಡ ರಣತಂತ್ರ ಹೇಳದಿದ್ದರೆ. ಆಪ್ತ ವಲಯಗಳ ಮೂಲಕ ಡಾ.ಅಶ್ವಥನಾರಾಯಣ ಬೀಸಿರುವ ಬಲೆಗೆ ಮುದ್ದಹನುಮೇಗೌಡರು ಬಿದ್ದಂತೆ ಕಾಣುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕುಣಿಗಲ್ ತಾಲೂಕಿನಲ್ಲಿ ಒಂದು ವೇಳೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಸಂದರ್ಭದಲ್ಲಿ ಬಹುತೇಕ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗುವ ವಿಶ್ವಾಸದೊಂದಿಗೆ ಮುದ್ದಾಹನುಮೆಗೌಡರು ಈಗಾಗಲೇ ಕ್ಷೇತ್ರದಲ್ಲಿ ಪ್ರತಿ ಹಳ್ಳಿಹಳ್ಳಿಗೂ ಸುತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಸದ್ಯಕ್ಕೆ ನಾನು ಈಗ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಪಕ್ಷದಿಂದ ಟಿಕೆಟ್ ಕೇಳುತ್ತೇನೆ ಎಂದು ಎಸ್.ಪಿ.ಎಮ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದಾರೆ. ಕ್ಷೇತ್...
ಕುಣಿಗಲ್ : ಇಂಧನ ಬೆಲೆ ಹೆಚ್ಚಳ , ಕೃಷಿ ಕಾಯ್ದೆ ವಾಪಸ್ ಗೆ ಒತ್ತಾಯಿಸಿ ಕುಣಿಗಲ್ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಕುಣಿಗಲ್ ಶಾಸಕ ಡಾ||ರಂಗನಾಥ್ ಅವರ ಅನುಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಗೆ ಕಾರ್ಯಕರ್ತರು ಸಾಥ್ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಮಾತನಾಡಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರ ಏರಿಕೆಯಿಂದಾಗಿ ಸಾಮಾನ್ಯ ಜನರ ಜೀವನ ಮಾಡುವುದೇ ಕಷ್ಟವಾಗಿದೆ ಕೃಷಿಕರ ಬದುಕನ್ನು ಕಿತ್ತುಕೊಳ್ಳುವ ಕಾಯ್ದೆ ಜಾರಿಗೊಳಿಸಿದ್ದು ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರು ಬಡವರನ್ನು ಮರೆತು ವ್ಯಾಪಾರಿಗಳ ಪರವಾಗಿ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂದು ಆಕ್ರೋಶ ಹಾಕಿದರು ಯುವ ಕಾಂಗ್ರೆಸ್ ಅಧ್ಯಕ್ಷ ಲೋಹಿತ್ ಮಾತನಾಡಿ ರೈತರು ಮತ್ತು ಜನಸಾಮಾನ್ಯರ ಹಿತ ಮರೆತಿರುವ ಕೇಂದ್ರ ಸರ್ಕಾರ ಬಡ ಜನತೆಯ ಓಟು ಪಡೆದು ನಂತರ ಜನರಿಗೆ ಗ್ಯಾಸ್ ಬೆಲೆ , ತೈಲ ಆಹಾರ ಪದಾರ್ಥಗಳು ಹೆಚ್ಚಳ ಮಾಡುವ ಮೂಲಕ ಜನತೆಗೆ ಬಾರಿ ದೊಡ್ಡ ಉಡುಗೊರೆ ನೀಡಿದೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದುರು. ಪ್ರತಿಭಟನೆಯಲ್ಲಿ ಪುರಸಭಾಧ್ಯಕ್ಷ ನಾಗೇಂದ್ರ , ಉಪಾಧ್ಯಕ್ಷೆ ಮಂಜುಳಾ, ಹಾಲುವಾಗಿಲು ಸ್ವಾಮಿ , ರಂಗಸ್ವಾಮಿ ಮಮತಾಜ್, ನಾರಾಯಣ್, ಆಕಾಶ್ ಪಾಳೆಗಾರ್ ಮತ್ತು ಪಕ್ಷದ ಮುಖಂಡರು ಹಾಗೂ ...
Comments
Post a Comment