Posts

Showing posts from October, 2020

ರೈತರ ಬೆಂಬಲ ಬೆಲೆಯಂತೆ ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯುವುದು ಅಸಾಧ್ಯ. ಸಂಬಳ ಕೊಡುವುದಕ್ಕೆ ಹಣ ಇಲ್ಲ - ಬಿ.ಎಸ್.ವೈ

Image
ಕೊಪ್ಪಳ(ಅ.10): ಘೋಷಿತ ಬೆಂಬಲ ಬೆಲೆಯಂತೆ ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯುವುದು ಅಸಾಧ್ಯ. ಸಂಬಳ ಕೊಡುವುದಕ್ಕೆ ಹಣ ಇಲ್ಲ ಎಂದ ಮೇಲೆ ಇನ್ನು ಬೆಂಬಲ ಬೆಲೆ ಖರೀದಿ ಮಾಡಲು ಹಣ ಎಲ್ಲಿಂದ ತರಲಿ? ಇದು, ಅವರಿವರ ಹೇಳಿಕ ಅಥವಾ ಪ್ರಶ್ನೆಯಲ್ಲ. ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಕೈಚೆಲ್ಲಿದ ಪರಿ. ಮೆಕ್ಕೆಜೋಳ ಮತ್ತು ಸಜ್ಜೆ ಬೆಂಬಲ ಬೆಲೆ ಕೇಂದ್ರವನ್ನು ತೆರೆಯುವಂತೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಧರಣಿ ಕೈಬಿಟ್ಟು ಬೆಂಗಳೂರಿಗೆ ನಿಯೋಗದಲ್ಲಿ ತೆರಳಿದ್ದರು. ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರ ಸಾರಥ್ಯದಲ್ಲಿ ಜಿಲ್ಲೆಯ ನಿಯೋಗ ಗುರುವಾರ ಸಿ.ಎಂ. ಯಡಿಯೂರಪ್ಪ ಅವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿತು.   ರಾಜ್ಯ ರೈತ ಸಂಘದ ಮನವಿಯನ್ನು ಸಲ್ಲಿಸಿ, ಕೂಡಲೇ ಬೆಂಬಲ ಬೆಲೆ ಕೇಂದ್ರ ತೆರೆಯುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಈ ವರ್ಷ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವುದು ಅಸಾಧ್ಯ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ..!

Image
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಇಡೀ ದೇಶವೇ ಆ ಸಂತ್ರಸ್ತ ಕುಟುಂಬದ ಪರವಾಗಿ ನಿಂತಿತ್ತು. ಅದೇ ರೀತಿ ಕರ್ನಾಟಕದಲ್ಲೂ ಸಹ ಕಾಂಗ್ರೆಸ್ ಪಕ್ಷ, ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯಾದ್ಯಂತ ವ್ಯಾಪಕವಾಗಿ ಈ ಬಗ್ಗೆ ಪ್ರತಿಭಟನೆ ನಡೆಸಿದ್ದರು. ಈ ರೀತಿ ದಲಿತ ಸಮುದಾಯದ ಮೇಲಿನ ದೌರ್ಜನ್ಯದ ಬಗ್ಗೆ ಮುಂದಿನ ದಿನಗಳಲ್ಲೂ ದೊಡ್ಡ ಮಟ್ಟದ ಪ್ರತಿಭಟನೆ, ಜಾಗೃತಿ ಮೂಡಿಸುವ ಯೋಜನೆ ಕೂಡಾ ಸಿದ್ದಪಡಿಸಿಕೊಂಡಿದ್ದರು. ಆದರೆ ಬಿಜೆಪಿ ಪಕ್ಷ ಇಡೀ ಪ್ರಕರಣವನ್ನು ಹಾದಿ ತಪ್ಪಿಸಲು ಕಾಂಗ್ರೆಸ್ ಪಕ್ಷದ ಮೇಲೆ ಗಧಾ ಪ್ರಹಾರ ಮಾಡಲು ಹೊರಟಿದೆ. ರಾಷ್ಟ್ರ ಮಟ್ಟದಲ್ಲಿ ಸನ್ಮಾನ್ಯ ರಾಹುಲ್ ಗಾಂಧಿಯವರು ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಈ ಪ್ರಕರಣದಲ್ಲಿ ಭಾಗಿಯಾಗಲು ತಪ್ಪಿಸಿದ್ದನ್ನು ಇಡೀ ರಾಷ್ಟ್ರದ ಜನತೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದಾರೆ. ಇದೇ ಹಾದಿಯನ್ನು ಬಿಜೆಪಿ ಪಕ್ಷ ಕರ್ನಾಟಕದಲ್ಲೂ ಹಿಡಿದು ಕೆಟ್ಟ ರಾಜಕೀಯ ನಡೆಗೆ ನಾಂದಿ ಹಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಇಂತಹ ಚಟುವಟಿಕೆಗಳಿಂದ ದೂರ ಇಡಲು, ದಲಿತ, ಶೋಷಿತ ವರ್ಗಗಳ ವಿರೋಧಿ ಬಿಜೆಪಿ ಪಕ್ಷ ತನ್ನೆಲ್ಲಾ ಶಕ್ತಿ ಉಪಯೋಗಿಸಿದೆ. ಅಧಿಕಾರ ದುರ್ಬಳಕೆ, ದುರಾಡಳಿತ, ದಲಿತ, ಶೋಷಿತ ವರ್ಗಗಳ ವಿರೋಧಿ ನಿಲುವಿನ ಬಿಜೆಪಿ ಪಕ್ಷ ಮುಂದಿನ ದಿನಗಳಲ್ಲೂ ಇದೇ ದಾರಿ ಮುಂದುವರಿಸಿದ್ದೇ ಆದರೆ ನಾ...