Posts

Showing posts from January, 2021

ಟ್ರಾಕ್ಟರ್ ಜಪ್ತಿ ಮಾಡಿದರೆ ಅದನ್ನು ನಾವೇ ಬಿಡಿಸಿಕೊಡಲು ಹೋಗುತ್ತೇವೆ - ಡಿಕೆಶಿ

Image
ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಗಣರಾಜ್ಯೋತ್ಸವ ದಿನವಾದ ಮಂಗಳವಾರ ರೈತರು ದೆಹಲಿಯಲ್ಲಿ ಹಮ್ಮಿಕೊಂಡಿರುವ ರೈತ ಪೆರೇಡ್‌ ಬೆಂಬಲಿಸಿ ರಾಜಧಾನಿ ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಟ್ರ್ಯಾಕ್ಟರ್‌, ಟ್ರಕ್‌ಗಳೊಂದಿಗೆ ರೈತರ ಬೃಹತ್‌ ಪರೇಡ್‌ ಹಮ್ಮಿಕೊಳ್ಳಲಾಗಿದೆ. ರೈತರ ಟ್ರಾಕ್ಟರ್ ಜಪ್ತಿ ಮಾಡಿದರೆ ಅದನ್ನು ನಾವೇ ಬಿಡಿಸಿಕೊಡಲು ಹೋಗುತ್ತೇವೆ. ಎಲ್ಲರಿಗೂ ನೋವು ಹೇಳಿಕೊಳ್ಳುವ ಹಕ್ಕಿದೆ. ರೈತರ ಬಾಯಿ ಮುಚ್ಚಿಸುವ ಕೆಲಸ ಮಾಡಬಾರದು. ನಮ್ಮ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ತಡೆದಿದ್ದರೂ. ನಮ್ಮದು ಪಕ್ಷದ ಪ್ರತಿಭಟನೆ ಆಗಿತ್ತು. ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಂತುಕೊಳ್ಳಬೇಕು ಪೊಲೀಸರೇ ನೀವು ಸರ್ಕಾರದ ಕೈಗೊಂಬೆಯಾಬೇಡಿ.  ನೀವು ಎಲ್ಲರಿಗು ಒಂದೇ ನ್ಯಾಯ ಕೊಡಿ. ಸುಪ್ರೀಂಕೋರ್ಟ್ ಸಹ ಪ್ರತಿಭಟನೆ ಮಾಡಬೇಡಿ ಎಂದು ಹೇಳಿಲ್ಲ. ಮಂಗಳವಾರ ರಜೆ ಇದೆ, ಯಾವ ಸಂಚಾರ ಸಮಸ್ಯೆಯೂ ಆಗಲ್ಲ ಅನ್ನದಾತ ಅನ್ನ ಕೊಟ್ಟರೇನೆ ನಾವು ಇರೋದು. ಜಿಲ್ಲೆಗಳಲ್ಲಿ ರೈತರನ್ನ ತಡೆಯುತ್ತಿದ್ದಾರೆ. ಡ್ರೈವರ್‌ಗಳಿಗೆ ಹೆದರಿಸುತ್ತಿದ್ದಾರೆ. ಕಾಂಗ್ರೆಸ್ ರೈತರ ಬೆಂಬಲವಾಗಿ ನಿಂತುಕೊಳ್ಳುತ್ತದೆ" ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ರೈತರ ಪ್ರತಿಭಟನೆಗೆ ಬೆಂಬಲ ಘೋಷಣೆ ಮಾಡಿದರು.

ರೈತರ ಟ್ಯಾಕ್ಟರ್ ತಡೆಹಿಡಿದ ಕುಣಿಗಲ್ ಪೊಲೀಸರು...! ಬೀದಿಗಿಳಿದ ರೈತರು...!

Image
ಕುಣಿಗಲ್ : ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಗಣರಾಜ್ಯೋತ್ಸವ ದಿನವಾದ ಮಂಗಳವಾರ ರೈತರು ದೆಹಲಿಯಲ್ಲಿ ಹಮ್ಮಿಕೊಂಡಿರುವ ರೈತ ಪೆರೇಡ್‌ ಬೆಂಬಲಿಸಿ ರಾಜಧಾನಿ ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಟ್ರ್ಯಾಕ್ಟರ್‌, ಟ್ರಕ್‌ಗಳೊಂದಿಗೆ ರೈತರ ಬೃಹತ್‌ ಪರೇಡ್‌ ಹಮ್ಮಿಕೊಳ್ಳಲಾಗಿದೆ. ಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆಯುವ ರೈತರ ಪರೇಡ್ ನಲ್ಲಿ ಭಾಗವಹಿಸಲು ಕುಣಿಗಲ್ ತಾಲೂಕಿನಿಂದ ರೈತರು ತಮ್ಮ ವಾಹನಗಳೊಂದಿಗೆ ಹೊರಟಿದ್ದರು ಆದರೆ ರಾಷ್ಟ್ರೀಯ ಹೆದ್ದಾರಿ ಜಾನ್ಸನ್ ಫ್ಯಾಕ್ಟರಿಯ ಬಳಿ ಪೊಲೀಸರು ರೈತರ ಟ್ಯಾಕ್ಟರ್ ಗಳನ್ನು ತಡೆಹಿಡಿದಿದ್ದಾರೆ.  ಸರ್ಕಾರ ಪೊಲೀಸರನ್ನು ಬಳಸಿಕೊಂಡು ಗಣರಾಜ್ಯೋತ್ಸವದ ರೈತರ ಪರೇಡ್ ವಿಫಲಗೊಳಿಸಲು ಹುನ್ನಾರ ನಡೆಸಿದೆ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ತಿಳಿಸಿದರು. ತಾಲೂಕು ಅಧ್ಯಕ್ಷ  ಅನಿಲ್ ಕುಮಾರ್ ಮಾತನಾಡಿ ಶಾಂತಿಯುತವಾಗಿ ನಡೆಯುವ ರೈತ ಪರೇಡ್'ಗೆ ಪೊಲೀಸರು ಅವಕಾಶ ಮಾಡಿಕೊಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಪೊಲೀಸರು ಇದಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರೈತರು ತಮ್ಮ ಟ್ಯಾಕ್ಟರ್ ಗಳನ್ನು ರಾಷ್ಟ್ರೀಯ ದಾರಿಯಲ್ಲಿ ನಿಲ್ಲಿಸಿ ಸರಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ದಿಕ್ಕಾರ ಕೂಗುತ್ತಾ ಪ್ರತಿಭಟನೆಗಿಳಿದರು ಇದರಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ವಾಹನ ಸವಾರರು ಪರದಾಡುವಂತಾಯಿತು.

ಹೋರಿಗರುಗಳನ್ನು ಸಂತೆಯಲ್ಲೇ ಬಿಟ್ಟು ಹೋದರು!

Image
ಚನ್ನರಾಯಪಟ್ಟಣ  ಪಟ್ಟಣದಲ್ಲಿ ಶುಕ್ರವಾರ ನಡೆಯುವ ದನಗಳ ಸಂತೆಯಲ್ಲಿ ಮಾರಲು, ಜರ್ಸಿ ಹೋರಿಗರುಗಳನ್ನು ತಂದಿದ್ದ ರೈತರು, ಖರೀದಿಸುವವರಿಲ್ಲದೇ ಅಲ್ಲಿಯೇ ಬಿಟ್ಟು ಹೋಗಿದ್ದಾರೆ.ಗೋಹತ್ಯೆ ನಿಷೇಧ ಕಾಯ್ದೆಯಿಂದಾಗಿ ಯಾರೂ ಖರೀದಿಸಲು ಮುಂದೆ ಬರಲಿಲ್ಲ. ಕರುಗಳನ್ನು ತಂದ ರೈತರು ಅವುಗಳನ್ನು ವಾಪಸ್ ಒಯ್ಯದೇ ಕಟ್ಟಿದ್ದಲ್ಲಿಯೇ ಬಿಟ್ಟು ಹೋಗಿದ್ದರಿಂದ, 32 ಕರುಗಳು ಅನಾಥವಾಗಿ ನಿಂತಿದ್ದವು. ಬೆಳಿಗ್ಗೆಯಿಂದ ಆಹಾರವಿಲ್ಲದೇ, ಕರುಗಳು ಬಳಲಿದ್ದವು. ನಾಯಿಗಳು ಕಚ್ಚಿ ಸಾಯಿಸುತ್ತವೆ ಎಂಬ ಆತಂಕದಿಂದ ಅವುಗಳನ್ನು ವಾಹನದಲ್ಲಿ ತಂದು ತಾಲ್ಲೂಕು ಕಚೇರಿ ಆವರಣದಲ್ಲಿ ಬಿಡಲಾಯಿತು ಎಂದು ಸ್ಥಳೀಯರಾದ ಮಹೇಶ್ ತಿಳಿಸಿದರು. ಬಳಿಕ, ಅವುಗಳನ್ನು ತಾಲ್ಲೂಕು ಆಡಳಿತವು ಮೈಸೂರಿನ ಪಿಂಜರಪೋಳಗೆ ಕಳುಹಿಸುವ ವ್ಯವಸ್ಥೆ ಮಾಡಿತು.'ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರೆ ಸಾಲದು. ರಾಸುಗಳನ್ನು ಸಾಕುವುದಕ್ಕಾಗಿ, ಸರ್ಕಾರವು ಗೋ ಶಾಲೆಗಳನ್ನು ತೆರೆಯಬೇಕಿತ್ತು. ಈ ಬಗ್ಗೆ ಚಿಂತಿಸದೇ ಕಾಯ್ದೆ ತಂದಿದ್ದು ತರವಲ್ಲ.

ದಾವಣಗೆರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಕುಣಿಗಲ್ ಮೂಲದ ಕಾರ್ಮಿಕ ಸಾವು ಪಾರ್ಥಿವ ಶರೀರ ತರಲು ಪ್ರಯಾಣ ಬೆಳೆಸಿದ ಕುಣಿಗಲ್ ಶಾಸಕ..!

Image
ದಾವಣಗೆರೆ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ಡಿಸ್ಟಿಲರಿ ಕಾರ್ಖಾನೆಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಒಬ್ಬರು ಮೃತರಾಗಿದ್ದಾರೆ. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಲಕ್ಷ್ಮಿಪುರ ಗ್ರಾಮದ ರಘು(38) ಮೃತದುರ್ದೈವಿ . ಇನ್ನು ಮತಪಟ್ಟ ಕುಣಿಗಲ್ ತಾಲೂಕಿನ ನಿವಾಸಿಯಾದ ರಘು ರವರ ಸಾವಿನ ಸುದ್ದಿಯನ್ನು ತಿಳಿದ ತಾಲೂಕಿನ ಶಾಸಕರಾದ  ರಂಗನಾಥ್ ರವರು ತಮ್ಮೆಲ್ಲ ಕಾರ್ಯಗಳನ್ನು ರದ್ದುಗೊಳಿಸಿ ಪಾರ್ಥಿವ ಶರೀರವನ್ನು ತಾಲೂಕಿಗೆ ತರಲು ಸ್ವತಹ ಶಾಸಕರು ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾರೆ . ಡಿಸ್ಟಿಲರಿ ಕರ್ಖಾನೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು. ತಕ್ಷಣ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಆದರೆ ಡಿಸ್ಟಿಲರಿ ಫ್ಯಾಕ್ಟರಿ ಆದ ಕಾರಣ ಬೆಂಕಿ ಹತೋಟಿಗೆ ಬರುತ್ತಿಲ್ಲ. ಬೆಂಕಿಯ ಶಾಖ ಹೆಚ್ಚಾಗಿದ್ದು ಸ್ಥಳೀಯರು ಕಾರ್ಖಾನೆಯಿಂದ 500 ಮೀಟರ್​ ದೂರ ಸರಿದಿದ್ದಾರೆ. ಅವಘಡದಲ್ಲಿ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ಹರಿಹರ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದ...