Posts

Showing posts from February, 2021

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್‌ನಲ್ಲಿ ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

Image
ಇಂದಿನಿಂದ ದೇಶಾದ್ಯಂತ ಎರಡನೇ‌ ಹಂತದ ಕೊರೊನಾ ಲಸಿಕಾ ಅಭಿಯಾನ ಶುರುವಾಗಿದೆ. ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್‌ನಲ್ಲಿ ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. COVID-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡುತ್ತೇನೆ. ಒಟ್ಟಿನಲ್ಲಿ, ನಾವು ಭಾರತವನ್ನು COVID-19 ನಿಂದ ಮುಕ್ತಗೊಳಿಸೋಣ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಏಮ್ಸ್ನಲ್ಲಿ COVID-19 ಲಸಿಕೆಯ ನನ್ನ ಮೊದಲ ಪ್ರಮಾಣವನ್ನು ತೆಗೆದುಕೊಂಡೆ. COVID-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡುತ್ತೇನೆ. ಒಟ್ಟಿನಲ್ಲಿ, ನಾವು ಭಾರತವನ್ನು COVID-19 ಅನ್ನು ಮುಕ್ತಗೊಳಿಸೋಣ!   ಎಂದು ಮೋದಿ ತಿಳಿಸಿದ್ದಾರೆ.

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕುಣಿಗಲ್ ತಾಲೂಕಿನಲ್ಲಿ "ಕೈ" ಪ್ರತಿಭಟನೆ

Image
ಕುಣಿಗಲ್ : ಇಂಧನ ಬೆಲೆ ಹೆಚ್ಚಳ , ಕೃಷಿ ಕಾಯ್ದೆ ವಾಪಸ್ ಗೆ ಒತ್ತಾಯಿಸಿ ಕುಣಿಗಲ್ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಕುಣಿಗಲ್ ಶಾಸಕ ಡಾ||ರಂಗನಾಥ್ ಅವರ ಅನುಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಗೆ ಕಾರ್ಯಕರ್ತರು ಸಾಥ್ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಮಾತನಾಡಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ  ನಿರಂತರ ಏರಿಕೆಯಿಂದಾಗಿ ಸಾಮಾನ್ಯ ಜನರ ಜೀವನ ಮಾಡುವುದೇ ಕಷ್ಟವಾಗಿದೆ ಕೃಷಿಕರ ಬದುಕನ್ನು ಕಿತ್ತುಕೊಳ್ಳುವ ಕಾಯ್ದೆ ಜಾರಿಗೊಳಿಸಿದ್ದು ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರು  ಬಡವರನ್ನು ಮರೆತು ವ್ಯಾಪಾರಿಗಳ ಪರವಾಗಿ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂದು ಆಕ್ರೋಶ ಹಾಕಿದರು ಯುವ ಕಾಂಗ್ರೆಸ್ ಅಧ್ಯಕ್ಷ ಲೋಹಿತ್  ಮಾತನಾಡಿ ರೈತರು ಮತ್ತು ಜನಸಾಮಾನ್ಯರ ಹಿತ ಮರೆತಿರುವ ಕೇಂದ್ರ ಸರ್ಕಾರ ಬಡ ಜನತೆಯ ಓಟು ಪಡೆದು ನಂತರ ಜನರಿಗೆ ಗ್ಯಾಸ್ ಬೆಲೆ , ತೈಲ ಆಹಾರ ಪದಾರ್ಥಗಳು ಹೆಚ್ಚಳ ಮಾಡುವ ಮೂಲಕ ಜನತೆಗೆ ಬಾರಿ ದೊಡ್ಡ ಉಡುಗೊರೆ ನೀಡಿದೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದುರು. ಪ್ರತಿಭಟನೆಯಲ್ಲಿ ಪುರಸಭಾಧ್ಯಕ್ಷ ನಾಗೇಂದ್ರ , ಉಪಾಧ್ಯಕ್ಷೆ ಮಂಜುಳಾ,  ಹಾಲುವಾಗಿಲು ಸ್ವಾಮಿ , ರಂಗಸ್ವಾಮಿ ಮಮತಾಜ್,  ನಾರಾಯಣ್, ಆಕಾಶ್ ಪಾಳೆಗಾರ್ ಮತ್ತು ಪಕ್ಷದ ಮುಖಂಡರು ಹಾಗೂ ...