Posts

Showing posts from June, 2021

ಪ್ರತಿಭಟನೆಗೆ ಸಂಬಂಧಿಸಿದಂತೆ ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಎಫ್ಐಆರ್

Image
ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಎಫ್‍ಐಆರ್  ಕುಣಿಗಲ್ : ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ವಿರುದ್ಧ ಕುಣಿಗಲ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಅಪಘಾತ ಪ್ರಕರಣವೊಂದರಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಶೀಘ್ರವಾಗಿ ಮಾಡಿಕೊಡುವಂತೆ ಮನವಿ ಮಾಡಿಕೊಂಡ ಗ್ರಾಪಂ ಸದಸ್ಯರೊಬ್ಬರೊಂದಿಗೆ ಸಿಪಿಐ ಗುರುಪ್ರಸಾದ್ ಉದ್ದಟತನದಿಂದ ವರ್ತಿಸಿದ್ದ ಆರೋಪ ಕೇಳಿಬಂದಿತ್ತು. ಜೂನ್ 19ರಂದು ಸಿಪಿಐ ಗುರುಪ್ರಸಾದ್ ವಿರುದ್ಧ ಜನರನ್ನು ಸೇರಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕ ಡಾ.ರಂಗನಾಥ್ ವಿರುದ್ಧ ಅಂದೇ ಪೊಲೀಸರು ಎನ್‍ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲಿಸಿದ್ದರು.   ಸಿಪಿಐ ಗುರುಪ್ರಸಾದ್ ವಿರುದ್ಧ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಎನ್‍ಸಿಆರ್ ಮಾತ್ರ ದಾಖಲಿಸಿದ್ದರು. ಜೆಡಿಎಸ್ ಮುಖಂಡ ಜಗದೀಶ್ ನಾಗರಾಜಯ್ಯ ಕುಣಿಗಲ್ ಶಾಸಕ ರಂಗನಾಥ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ದೂರು ನೀಡಿದ ಹಿನ್ನೆಲೆಯಲ್ಲಿ ಇದೀಗ ಎಫ್‍ಐಆರ್ ದಾಖಲಿಸಲಾಗಿದೆ.

ಕುಣಿಗಲ್ ತಾಲೂಕಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ.

Image
ಕುಣಿಗಲ್ : ಕುಖ್ಯಾತ ಸರಗಳ್ಳನನ್ನು ತುಮಕೂರಿನ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಮದ್ದೂರಿನ ಇಮ್ರಾನ್ ಖಾನ್ (24) ಬಂಧಿತ ಆರೋಪಿ. ಈತ ಮಂಡ್ಯ, ತುಮಕೂರು ಸೇರಿದಂತೆ ಹಲವು ಕಡೆ ತನ್ನದೇ ಒಂದು ತಂಡ ಕಟ್ಟಿಕೊಂಡು ಸರಗಳ್ಳತನ ಮಾಡ್ತಿದ್ದ. ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರನ್ನೇ ಗುರಿಯಾಗಿರಿಸಿ ಕೃತ್ಯವೆಸಗುತ್ತಿದ್ದ. ಜೂನ್ 14 ರಂದು ಬೈಕ್ ನಲ್ಲಿ ಬಂದು ವಸಂತ ಎಂಬ ಮಹಿಳೆಯನ್ನು ತಳ್ಳಿ ಸರ ಎಗರಿಸಿದ್ದ. ತಲೆಗೆ ಪೆಟ್ಟು ಬಿದ್ದ ಕಾರಣ ವಂಸತ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕುಣಿಗಲ್ ಪೊಲೀಸರು ಮೈಸೂರು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಮ್ರಾನ್ ಖಾನ್‌ನನ್ನು ದಸ್ತಗಿರಿ ಮಾಡಿದ್ದಾರೆ. ಈ ಕುಖ್ಯಾತ ಸರಗಳ್ಳನ ಬಂಧನದಿಂದ 8 ಪ್ರಕರಣಗಳು ಬೆಳಕಿಗೆ ಬಂದಿವೆ.