Posts

Showing posts from September, 2021

ಅಕ್ಟೋಬರ್ 1 ರಂದು ಬೃಹತ್ ಆರೋಗ್ಯ ಶಿಬಿರ...!

Image
ಕುಣಿಗಲ್: ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮ ದಿನದ ಸ್ಮರಣಾರ್ಥ ಅಂಗವಾಗಿ ತಾಲೂಕಿನ ಪಟ್ಟಣದಲ್ಲಿ ಹೆಚ್.ಡಿ  ರಾಜೇಶ್ ಗೌಡ ಸೇವಾ ಪ್ರತಿಷ್ಠಾನ ರಿ. ಇವರ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಇದನ್ನು ಕುಣಿಗಲ್ ತಾಲೂಕಿನ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಸಮಾಜ ಸೇವಕರು ಹಾಗೂ ಬಿಜೆಪಿ ಮುಖಂಡರಾದ ಹೆಚ್.ಡಿ ರಾಜೇಶ್ ಗೌಡರವರು ತಿಳಿಸಿದರು. ದಿನಾಂಕ 01-10-2021 ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಟ್ಟಳ್ಳಿ ಮಠ ಕಾಲೇಜು ಆವರಣ ಸಂತೆಪೇಟೆ ಹುತ್ರಿದುರ್ಗ ಹೋಬಳಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಇದರ ಅಂಗವಾಗಿ ಇಂದು ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ರಾಜೇಶ್ ಗೌಡರವರು  ಅತ್ಯುತ್ತಮ ಸುಸಜ್ಜಿತವಾದ ಆಸ್ಪತ್ರೆ ಮಾದರಿಯ ರೀತಿಯಲ್ಲಿ ಟೆಂಟುಗಳ ನಿರ್ಮಾಣವಾಗುತ್ತಿದ್ದು ಅದನ್ನು ಪರಿಶೀಲಿಸಿ ಮಾತನಾಡಿದರು.

ಬಂದ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಬೆಂಕಿಯಿಟ್ಟ ಕಿಚ್ಚ ಹೊರಹಾಕಿದ ಕುಣಿಗಲ್ ರೈತರು..!

Image
ಕುಣಿಗಲ್ : ಕಳೆದ  ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (SKM) ಭಾರತದಾದ್ಯಂತ ಬಂದ್​​ಗೆ ಕರೆ ನೀಡಿತ್ತು. ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ತಾಲೂಕಿನ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ‘ಭಾರತ್ ಬಂದ್’ ತಾಲೂಕಿನಲ್ಲಿ ಸಂಪೂರ್ಣ ಯಶಸ್ವಿಯಾಯಿತು.  ತಾಲೂಕಿನಲ್ಲಿ ಕೆಲ ತೆರೆದಿದ್ದ ಅಂಗಡಿ-ಮುಂಗಟ್ಟುಗಳನ್ನು ನೂರಾರು ರೈತರ ಸರಿ ಸಂಪೂರ್ಣ ಮುಚ್ಚಿಸುವಲ್ಲಿ ಯಶಸ್ವಿಯಾದರು ರೈತರ ಕರೆಗೆ ಓಗೊಟ್ಟು ಕೆಲ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ತಾಲೂಕು ಅಧ್ಯಕ್ಷ ಅನಿಲ್ ರವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರ ಅಣಕು ಶವಯಾತ್ರೆಯನ್ನು ನಡೆಸಿ ನೂರಾರು ರೈತರ ಸಮ್ಮುಖದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಧಿಕಾರಗಳನ್ನು ಕೂಗುತ ಹುಚ್ಚು ಮಾಸ್ತಿ ಗೌಡರ ವೃತ್ತದ ಬಳಿ ಪ್ರಧಾನಿ ನರೇಂದ್ರ ಮೋದಿಯವರ ಹಣಕು ಶವಕ್ಕೆ ಬೆಂಕಿ ಹಚ್ಚುವ ಮೂಲಕ ತಮ್ಮ ಕಿಚ್ಚನ್ನು ಹೊರಹಾಕಿದರು.